ಆಯತಪ್ಪಿ ಸಿಮೆಂಟ್ ಕಂಬ ಮೈಮೇಲೆ ಬಿದ್ದು ವ್ಯಕ್ತಿ ಓರ್ವ ಸಾವು

Share

ಭಟ್ಕಳ: ಇಲ್ಲಿನ ಹೆಸ್ಕಾಂ ಕಚೇರಿಗೆ ಕೂಲಿ ಕೆಲಸಕ್ಕೆಂದು ಬಂದ ವ್ಯಕ್ತಿಯೋರ್ವ ಕೆಲಸ ಮಾಡುತ್ತಿರುವಾಗಲೇ ಆಯ ತಪ್ಪಿ ಸಿಮೆಂಟ್ ಕಂಬ ಮೈಮೇಲೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದು, ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಘಟನೆ ನಡೆದಿದೆ. 

ಮೃತ ವ್ಯಕ್ತಿಯನ್ನು ಇಲ್ಲಿನ ಕಟಗಾರ ಕೊಪ್ಪದ ನಿವಾಸಿ ದಾಮೋದರ ಈರಯ್ಯ ಗೊಂಡ (32) ಎಂದು ಗುರುತಿಸಲಾಗಿದ್ದು, ತಡೆಯ ಭಾಗಕ್ಕೆ ಬಲವಾದ ಪೆಟ್ಟು

ತಗುಲಿ ಗಂಭೀರವಾಗಿ ಗಾಯಗೊಂಡ ಇವರನ್ನು ಚಿಕಿತ್ಸೆಗಾಗಿ ಕುಂದಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಯಶಸ್ವಿ ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು. ನಂತರ ಇದ್ದಕ್ಕಿದ್ದಂತೆ ಉಸಿರಾಟದ ಸಮಸ್ಯೆಯುಂಟಾದ ಕಾರಣ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ. ಭಟ್ಕಳ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

error: Content is protected !!