ಕರ್ನಾಟಕ ವಿಶ್ವವಿದ್ಯಾಲಯ ೨೦೨೪ ರಲ್ಲಿ ನಡೆದ ಬಿ.ಸಿ.ಎ ಪರೀಕ್ಷೆಯಲ್ಲಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನ ವಿದ್ಯಾರ್ಥಿನಿ ಕುಮಾರಿ ಮಧುರಾ ಎಂ ನಾಯ್ಕ ರವರು ಶೇ. ೯೩.೪೬ ಪಡೆದು ಕರ್ನಾಟಕ ವಿಶ್ವವಿದ್ಯಾಲಯದ ಬಿಸಿಎ ವಿಭಾಗದಲ್ಲಿ
ದ್ವಿತೀಯ ರ್ಯಾಂಕ್ ಪಡೆದಿರುತ್ತಾರೆ. ಶ್ರೀಮತಿ ರಾಧಾ ಹಾಗೂ ಶ್ರೀ ಮಂಜುನಾಥ ನಾಯ್ಕ ರವರ ಸುಪುತ್ರಿಯಾಗಿದ್ದು, ಈ ವಿದ್ಯಾರ್ಥಿನಿಯ ಅಪ್ರತಿಮ ಸಾಧನೆಯಿಂದ ಉತ್ತರ ಕನ್ನಡ ಜಿಲ್ಲೆ ಹೆಮ್ಮೆ ಪಡುವಂತಾಗಿದೆ. ಈ ಯುವಪ್ರತಿಭೆಗೆ ಕಾಲೇಜು ಆಡಳಿತ ಮಂಡಳಿ, ಪ್ರಾಚಾರ್ಯರು, ಉಪನ್ಯಾಸಕರು, ಸಿಬ್ಬಂದಿ ವರ್ಗ, ಪಾಲಕರು ಹಾಗೂ ವಿದ್ಯಾರ್ಥಿಗಳು ಹೃತ್ಪೂರ್ವಕವಾಗಿ ಅಭಿನಂದಿಸಿರುತ್ತಾರೆ.
ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿಗೆ ಮತ್ತೊಂದು ರ್ಯಾಂಕ್
